ಬೆಂಗಳೂರು: ವರನಟ ಡಾ. ರಾಜಕುಮಾರ್ ಅವರ ಧರ್ಮಪತ್ನಿ ಪಾರ್ವತಮ್ಮ ರಾಜಕುಮಾರ್ ನಿಧನ ಹಿನ್ನೆಲೆ ಸದಾಶಿವನಗರದಲ್ಲಿರುವ ಪಾರ್ವತಮ್ಮ ನಿವಾಸಕ್ಕೆ ಆಗಮಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕಾಂಗ್ರೆಸ್ ಪಕ್ಷದ ಮುಖವಾಣಿ ಹಾಗೂ ಸ್ಥಗಿತಗೊಂಡಿದ್ದ ಐತಿಹಾಸಿಕ ಪತ್ರಿಕೆ 'ನ್ಯಾಷನಲ್ ಹೆರಾಲ್ಡ್' ಗೆ ಬೆಂಗಳೂರಿನ ವಸಂತನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮರು ಚಾಲನೆ ನೀಡಿದ ರಾಹುಲ್ ಗಾಂಧಿ ನಂತರ ಡಾ. ರಾಜಕುಮಾರ್ ಅವರ ನಿವಾಸಕ್ಕೆ ತೆರಳಿ ರಾಜಕುಮಾರ್ ಪುತ್ರತ್ರೈಯರಿಗೆ ಸಾಂತ್ವನ ಹೇಳಿದರು.
ಅನಾರೋಗ್ಯಕ್ಕೊಳಗಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರು ನಗರದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಬೆಳಿಗ್ಗೆ ಮೇ 31ರಂದು ನಿಧನರಾಗಿದ್ದರು.