ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಕುಲ್ ಬಾಲಾಜಿ ನಡೆಸಿಕೊಡುವ ಸೂಪರ್ ಟಾಕ್ ಟೈಮ್ ಕಾರ್ಯಕ್ರಮದಲ್ಲಿ ಈ ಬಗ್ಗೆ ರವಿಚಂದ್ರನ್ ತಮ್ಮ ಹಿಂದಿನ ಕಹಿ ನೆನಪೊಂದನ್ನು ಮಾಡಿಕೊಂಡಿದ್ದಾರೆ. ಕನ್ನಡದಲ್ಲಿ ಮೂಡಿಬಂದಿದ್ದ ಹಳ್ಳಿಮೇಷ್ಟು ಚಿತ್ರ ಮೆಗಾ ಹಿಟ್ ಆಗಿತ್ತು. ಆ ಚಿತ್ರದಲ್ಲಿ ನಟಿಸಿದ್ದ ನಟಿ ಬಿಂದಿಯಾ ಚಿತ್ರೀಕರಣ ಸಂದರ್ಭ ಸಿಬ್ಬಂದಿ ಜತೆ ಜಗಳ ಮಾಡಿಕೊಂಡಿದ್ದರು. ಅದು ಸಾಲದು ಎಂಬಂತೆ ಮುಂಬೈಗೆ ತೆರಳಿ ರವಿಚಂದ್ರನ್ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದರು.