ಚಿತ್ರ ನಿರ್ದೇಶಕ ಯೋಗರಾಜ್ ಭಟ್, ನಟ ಗಣೇಶ್ ಹಾಗೂ ಇನ್ನಿತರ ತಂತ್ರಜ್ಞರೊಂದಿಗೆ ಸಿನಿಮಾ ವೀಕ್ಷಿಸಿರುವ ನಿರ್ದೇಶಕ ಸೂರಿ, ಭಟ್ಟರು-ಗಣೇಶ್ ಜೋಡಿಯಿಂದ ಪ್ರೇಕ್ಷಕರು ಮುಂಗಾರು ಮಳೆಯಂತಹ ಸಿನಿಮಾವನ್ನು ಎದುರುನೋಡುತ್ತಿದ್ದಾರೆ. ಆದರೆ ಇದು ಪ್ರೇಕ್ಷಕರ ನಿರೀಕ್ಷೆಗಿಂತಲೂ ಮೇಲ್ಮಟ್ಟದಲ್ಲಿದ್ದು, ಇಂದಿನ ಟ್ರೆಂಡ್ ಗೆ ತಕ್ಕಂತೆ ಇದೆ ಎಂದು ಹೇಳಿದ್ದಾರೆ. ಮುಗುಳುನಗೆ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನೀಡಿದ್ದು, ಸುಜ್ಞಾನ್ ಛಾಯಾಗ್ರಹಣವಿದೆ.