"ನಾವು ಕೇಳಿಕೊಂಡು ಬೆಳೆದಿರುವ ಪಾತ್ರಗಳುಳ್ಳ ಕಥೆ ಇದು. ನಾವು ಇವುಗಳ ಬಗ್ಗೆ ಸಾಕಷ್ಟು ಕೇಳಿದ್ದೇವೆ, ಟಿವಿಯಲ್ಲಿ ನೋಡಿದ್ದೇವೆ. ಇವೆಲ್ಲ ದಂತಕಥೆಗಳು... ಕೃಷ್ಣ, ದುರ್ಯೋಧನ, ಅರ್ಜುನ, ಕರ್ಣ, ಭೀಮ. ಆದುದರಿಂದ ಇಂತಹ ಸಿನೆಮಾಗೆ ಸಂಗೀತ ನೀಡುತ್ತಿರುವುದಕ್ಕೆ ಅತಿ ಹೆಚ್ಚಿನ ಸಂತೋಷವಾಗಿದೆ. ಇದು ದರ್ಶನ್ ಅವರ ಮೈಲಿಗಲ್ಲಿನ ಸಿನೆಮಾ ಕೂಡ ಮತ್ತು ಇದು ನನ್ನ ಉತ್ಸಾಹವನ್ನು ಇಮ್ಮಡಿಗೊಳಿಸಿದೆ" ಎನ್ನುತ್ತಾರೆ ಹರಿಕೃಷ್ಣ.