'ಒಂದು ಮೊಟ್ಟೆಯ ಕಥೆ'ಯ ನಿರ್ಮಾಪಕರೂ ಆಗಿರುವ ಪವನ್, ಈ ಅಭಿಯಾನ ಕೇವಲ ಪ್ರಚಾರ ಮಾತ್ರವಷ್ಟೇ ಅಲ್ಲ ಬದಲಾಗಿ ಬೋಳು ತಲೆಯ ಜನಗಳ ಜೊತೆಗೆ ನಾವಿದ್ದೇವೆ ಎಂದು ತೋರಿಸುವುದಕ್ಕೂ ಎನ್ನುತ್ತಾರೆ. "ಈ ಪ್ರಕ್ರಿಯೆಯಲ್ಲಿ ನನಗೆ ತಿಳಿದದ್ದೇನೆಂದರೆ ಬೋಳು ತಲೆಯವರನ್ನು ನಮ್ಮ ಹಾಗೆ ಹೆಚ್ಚು ಕೂದಲಿರುವ ಜನ ಪರಿಹಾಸ್ಯ ಮಾಡುತ್ತಾರೆ. ಇದರಿಂದ ಅಂತಹ ವ್ಯಕ್ತಿಗಳಿಗೆ ನೋವಾಗಬಹುದು" ಎನ್ನುತ್ತಾರೆ.