ನಿರ್ದೇಶಕ ಗುರುಪ್ರಸಾದ್ ಜೊತೆ ಮನಸ್ತಾಪ; 'ಎರಡನೇ ಸಲ' ಚಿತ್ರ ಪ್ರದರ್ಶನಕ್ಕೆ ನಿರ್ಮಾಪಕ ಯೋಗೇಶ್ ತಡೆ

ಯಶಸ್ವಿ ಪ್ರದರ್ಶನ ಕಾಣುತ್ತಿದ್ದ ಎರಡನೇ ಸಲ ಚಿತ್ರ ಇದೀಗ ನಿರ್ದೇಶಕ ಮತ್ತು ನಿರ್ಮಾಪಕರ ನಡುವಿನ ಗುದ್ದಾಟದಿಂದಾಗಿ ಸ್ಥಗಿತಗೊಂಡಿದೆ...
ಎರಡನೇ ಸಲ
ಎರಡನೇ ಸಲ
Updated on
ಬೆಂಗಳೂರು: ಯಶಸ್ವಿ ಪ್ರದರ್ಶನ ಕಾಣುತ್ತಿದ್ದ ಎರಡನೇ ಸಲ ಚಿತ್ರ ಇದೀಗ ನಿರ್ದೇಶಕ ಮತ್ತು ನಿರ್ಮಾಪಕರ ನಡುವಿನ ಗುದ್ದಾಟದಿಂದಾಗಿ ಸ್ಥಗಿತಗೊಂಡಿದೆ. 
ಮಾರ್ಚ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ಚಿತ್ರಕ್ಕೆ ವಿಮರ್ಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಯಶಸ್ವಿಯಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿತ್ತು. ಆದರೆ ಇದೀಗ ನಿರ್ದೇಶಕ ಗುರುಪ್ರಸಾದ್ ಮತ್ತು ನಿರ್ಮಾಪಕ ಯೋಗೇಶ್ ನಾರಾಯಣ್ ಅವರ ನಡುವಿನ ಗೊಂದಲದಿಂದಾಗಿ ಚಿತ್ರವನ್ನು ಹಿಂಪಡೆಯುತ್ತಿರುವುದಾಗಿ ಯೋಗೇಶ್ ಹೇಳಿದ್ದಾರೆ. 
ಈ ಬಗ್ಗೆ ಪ್ರತಿಕ್ರಿಯಿಸಿರುವ ಯೋಗೇಶ್ ನಾರಾಯಣ್ ಸದ್ಯ ಪ್ರದರ್ಶನಗೊಳ್ಳುತ್ತಿರುವ ಚಿತ್ರವನ್ನು ದುಖಃದಿಂದ ಹಿಂಪಡೆಯುತ್ತಿದ್ದೇನೆ. ನಿರ್ದೇಶಕ ಗುರುಪ್ರಸಾದ್ ರಿಂದ ಸಿನಿಮಾ ಅರ್ಧ ಸತ್ತಿದೆ. ಚಿತ್ರದ ಪ್ರಚಾರಕ್ಕೆ ಗುರುಪ್ರಸಾದ್ ಬಂದಿಲ್ಲ ಎಂದು ಹೇಳಿದ್ದಾರೆ. 
ರಾಜ್ಯಾದ್ಯಂತ ಪ್ರದರ್ಶನಗೊಳ್ಳುತ್ತಿರುವ ಎರಡನೇ ಚಿತ್ರದ ಎಲ್ಲಾ ಶೋಗಳನ್ನು ಸ್ಥಗಿತಗೊಳಿಸಲಾಗಿದ್ದು ಈ ಸಂಬಂಧ ನಾಳೆ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಲಿದೆ ಎಂದು ಯೋಗೇಶ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com