ಬಾಕ್ಸ್ ಆಫೀಸ್ ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ 'ಹೆಬ್ಬುಲಿ' ೨೫ನೇ ದಿನದತ್ತ ದಾಪುಗಾಲು ಹಾಕಿದೆ. ನಿರ್ಮಾಪಕ ಉಮಾಪತಿ ಮತ್ತು ನಿರ್ದೇಶಕರ ಜೊತೆಗೆ ಪ್ರಚಾರ ಸಭೆಗಳಿಗೆ ತೆರಳಿದ್ದ ಸುದೀಪ್, ಅಭಿಮಾನಿಗಳಿಂದ ಸಿನೆಮಾ ಬಗ್ಗೆ ಒಳ್ಳೆಯ ಅಭಿಪಾಯಗಳನ್ನು ಪಡೆಯುತ್ತಿರುವುದಕ್ಕೆ ಸಂತಸಗೊಂಡಿದ್ದಾರೆ. ಆದುದರಿಂದ ಅವರೇ ಕೃಷ್ಣ ಅವರಿಗೆ ನೂತನ ಸ್ಕ್ರಿಪ್ಟ್ ಮೇಲೆ ಕೆಲಸ ಮಾಡಲು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.