ಆರ್.ಕೆ ನಗರ ಉಪ ಚುನಾವಣೆಯಲ್ಲಿ ನಾನು ಯಾರನ್ನು ಬೆಂಬಲಿಸುವುದಿಲ್ಲ: ರಜನೀಕಾಂತ್

ತಮಿಳುನಾಡಿನ ಆರ್ .ಕೆ ನಗರ ವಿಧಾನ ಸಭೆ ಕ್ಷೇತ್ರಕ್ಕೆ ಏಪ್ರಿಲ್ 12 ರಂದು ನಡೆಯುವ ಉಪ ಚುನಾವಣೆಯಲ್ಲಿ ತಾವು ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ..
ರಜನೀಕಾಂತ್
ರಜನೀಕಾಂತ್

ಚೆನ್ನೈ: ತಮಿಳುನಾಡಿನ ಆರ್ .ಕೆ ನಗರ ವಿಧಾನ ಸಭೆ ಕ್ಷೇತ್ರಕ್ಕೆ ಏಪ್ರಿಲ್ 12 ರಂದು  ನಡೆಯುವ ಉಪ ಚುನಾವಣೆಯಲ್ಲಿ ತಾವು ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ.

ಬಿಜೆಪಿಯಿಂದ ಸ್ಪರ್ಧಿಸಿರುವ ಸಂಗೀತ ಸಂಯೋಜಕ ಗಂಗೈ ಅಮರಾನ್ ಮಂಗಳವಾರ ರಜನೀಕಾಂತ್ ಅವರನ್ನು ಭೇಟಿ ಮಾಡಿ ಬೆಂಬಲ ನೀಡುವಂತೆ ಕೋರಿದ್ದಾರೆ. ರಜನೀಕಾಂತ್ ತಮ್ಮ ತಂದೆಗೆ ಜಯ ಸಿಗಲೆಂದು ಹಾರೈಸಿದ್ದಾರೆ ಎಂದು ಗಂಗೈ ಅಮರಾನ್ ಪುತ್ರ ವೆಂಕಟ್ ಪ್ರಭು ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ನನ್ನ ಬೆಂಬಲ ಯಾವ ಪಕ್ಷಕ್ಕೂ ಇಲ್ಲ ಎಂದು  ರಜನೀಕಾಂತ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್ 5 ರಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನರಾದ ಹಿನ್ನೆಲೆಯಲ್ಲಿ ಆರ್.ಕೆ ನಗರ ವಿಧಾನ ಸಭಾ ಕ್ಷೇತ್ರ ತೆರವಾಗಿತ್ತು. ಈ ಸ್ಥಾನಕ್ಕೆ ಮುಂದಿನ ತಿಂಗಳು ಅಂದರೆ ಏಪ್ರಿಲ್ 12 ರಂದು ಚುನಾವಣೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com