ಇನ್ನು ಹೆಸರಿಡದ ಈ ನಿಗೂಢ ಥ್ರಿಲ್ಲರ್ ಚಿತ್ರಕ್ಕೆ ತಾರಾಗಣವನ್ನು ಆಯ್ಕೆ ಮಾಡಬೇಕಿದ್ದು, ಮುಂದಿನ ತಿಂಗಳು ಆಡಿಷನ್ ನಡೆಸುವುದಾಗಿ ತಿಳಿಸುತ್ತಾರೆ ನಿರ್ದೇಶಕ. "ಮೊದಲಿಗೆ ನಾಯಕನಟನ ಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರನ್ನು ಕೇಳಿಕೊಳ್ಳುವ ಮನಸ್ಸಿತ್ತು. ಆದರೆ ಇದು ಸಣ್ಣ ಬಜೆಟ್ ನ ಸಿನೆಮಾ ಆಗಿರುವುದರಿಂದ ಮತ್ತು ಕಥಾವಸ್ತುವಿಗೆ ನಿಷ್ಠಾವಂತರಾಗಿರಬೇಕಿರುವುದರಿಂದ, ಯಾರಾದರೂ ಹೆಚ್ಚಿನ ಹೂಡಿಕೆಗೆ ಮುಂದಾಗುತ್ತಾರೆಯೇ ಎಂದು ಕಾಯುತ್ತಿದ್ದೇವೆ" ಎನ್ನುವ ಮಂಜುನಾಥ್, ಕಾರ್ತಿಕ್ ರಾಮ್ ಛಾಯಾಗ್ರಹಣ ಮಾಡುತ್ತಿರುವುದಾಗಿ ತಿಳಿಸುತ್ತಾರೆ.