ಬೆಂಗಳೂರು: ಒಂದೇ ರೀತಿಯ ಪಾತ್ರ ಅಥವಾ ಒಂದೇ ಪ್ರಕಾರದ ಸಿನೆಮಾಗಳಿಗೆ ಸೀಮಿತಗೊಳಿಸಿಕೊಳ್ಳುವ ಜಾಯಮಾನವಲ್ಲ ರಿಯಲ್ ಸ್ಟಾರ್ ಉಪೇಂದ್ರ ಅವರದ್ದು. ಈಗ 'ಉಪ್ಪಿ-ರುಪೀ'ನಲ್ಲಿ ಋಣಾತ್ಮಕ ಹೀರೊ ಪಾತ್ರವನ್ನು ನಿರ್ವಹಿಸಿರುವ ಉಪ್ಪಿ ಮುಂದಿನ ಸಿನೆಮಾದಲ್ಲಿ ಅದಕ್ಕೆ ಸಂಪೂರ್ಣ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗುರುದತ್ ನಿರ್ದೇಶನದ 'ನಾಗಾರ್ಜುನ' ಸಿನೆಮಾದಲ್ಲಿ ಉಪೇಂದ್ರ ನಟಿಸುವುದು ನಿಶ್ಚಿತವಾಗಿದ್ದು, ಅದರಲ್ಲಿ ಕೌಟುಂಬಿಕ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ.