ಬೆಂಗಳೂರು: ಸುದೀಪ್ ಅಭಿನಯಿಸಬೇಕಿದ್ದ ರಕ್ಷಿತ್ ಶೆಟ್ಟಿ ನಿರ್ದೇಶನದ ಚಿತ್ರ ಅನಿರ್ಧಿಷ್ಟಾವಧಿಯವರೆಗೆ ಮುಂದೂಡಲಾಗಿದ್ದು, ಈಗ ವಾಣಿಜ್ಯ ದೃಷ್ಟಿಯಿಂದ ಯಶಸ್ಸು ಕಂಡ ಹೆಬ್ಬುಲಿ ನಿರ್ದೇಶಕ ಕೃಷ್ಣ ನಿರ್ದೇಶಿಸಲಿರುವ ಸಿನೆಮಾಗೆ ಸುದೀಪ್ ಮತ್ತೆ ಒಂದಾಗಲಿದ್ದಾರೆ. ಸಿನೆಮಾವೊಂದಕ್ಕೆ ಇಬ್ಬರೂ ಒಟ್ಟಿಗೆ ಬರಲಿದ್ದಾರೆ ಎಂಬ ಸುದ್ದಿ ಹಿಂದೆಯೇ ತಿಳಿದಿತ್ತಾದರೂ, ಈಗ ಅದು ಶೀಘ್ರದಲ್ಲೇ ನೆರವೇರಲಿದೆ.