ರಜನಿಕಾಂತ್ ಗಮನ ಸೆಳೆದ 'ನಿಬುಣನ್' ಟೀಸರ್

ಅರ್ಜುನ್ ಸರ್ಜಾ ಅವರ ೧೫೦ನೆಯ ಸಿನೆಮಾ 'ನಿಬುಣನ್' ಟೀಸರ್ ಅನಾವರಣ ಮಾಡಿದ ರಜನಿಕಾಂತ್, ಅದನ್ನು ಪ್ರಶಂಸಿಸಿರುವುದಕ್ಕೆ ಚಿತ್ರ ತಂಡ ಥ್ರಿಲ್ ಆಗಿದೆ.
'ನಿಬುಣನ್' ಸಿನೆಮಾದ ಸ್ಟಿಲ್
'ನಿಬುಣನ್' ಸಿನೆಮಾದ ಸ್ಟಿಲ್
Updated on
ಬೆಂಗಳೂರು: ಅರ್ಜುನ್ ಸರ್ಜಾ ಅವರ ೧೫೦ನೆಯ ಸಿನೆಮಾ  'ನಿಬುಣನ್' ಟೀಸರ್ ಅನಾವರಣ ಮಾಡಿದ ರಜನಿಕಾಂತ್, ಅದನ್ನು ಪ್ರಶಂಸಿಸಿರುವುದಕ್ಕೆ ಚಿತ್ರ ತಂಡ ಥ್ರಿಲ್ ಆಗಿದೆ. 
ಇದರ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ಅರುಣ್ ವೈದ್ಯನಾಥನ್ "ಟೀಸರ್ ನೋಡಿ ಅವರು (ರಜನೀಕಾಂತ್) ಬಹಳ ಖುಷಿ ಪಟ್ಟರು ಮತ್ತು ಎರಡನೇ ಬಾರಿ ನೋಡುವ ಆಸೆ ವ್ಯಕ್ತಪಡಿಸಿದರು. ಟೀಸರ್ ನೋಡಿ ಅವರು ಕೇಳಿದ ಮೊದಲ ಪ್ರಶ್ನೆ - ಸಂಗೀತ ನೀಡಿರುವವರು ಯಾರೆಂದು. ಸಿನೆಮಾವನ್ನು ಸರಿಯಾಗಿ ಪ್ರಚಾರ ಮಾಡಲು ಸಲಹೆ ನೀಡಿದರು" ಎನ್ನುತ್ತಾರೆ. 
ಕನ್ನಡ ಟ್ರೇಲರ್ ಅನ್ನು ಕೂಡ ಪ್ರಚಾರ ಮಾಡುವ ಯೋಜನೆಗಳಿವೆ ಎನ್ನುವ ಅವರು "ದೇಶದಾದ್ಯಂತ ರಜನಿಕಾಂತ್ ಅವರಿಗೆ ಅಭಿಮಾನಿಗಳಿದ್ದಾರೆ. ಕನ್ನಡ ಸಿನೆಮಾರಂಗದ ಇತರ ತಾರೆಯರನ್ನು ಕೂಡ ನಾವು ಪ್ರಚಾರಕ್ಕೆ ಪರಿಗಣಿಸುತ್ತಿದ್ದೇವೆ. ಕಿಚ್ಚ ಸುದೀಪ್ ಕೂಡ ನಮ್ಮ ಟ್ರೇಲರ್ ನೋಡಿದ್ದಾರೆ. ಅದಿನ್ನೂ ಅಂತಿಮಗೊಂಡಿಲ್ಲವಾದರೂ ಅವರಿಗೆ ಇಷ್ಟವಾಯಿತು. ಅದನ್ನು ಇನ್ನಷ್ಟು ಸರಿಪಡಿಸಿ ಅವರಿಗೆ ಮತ್ತೆ ತೋರಿಸಲಿದ್ದೇವೆ" ಎನ್ನುತ್ತಾರೆ ಅರುಣ್. 
ಈ ಸಿನೆಮಾ ಕನ್ನಡದಲ್ಲಿ 'ವಿಸ್ಮಯ' ಎಂಬ ಹೆಸರಿನಲ್ಲಿ ಮೂಡಿಬರುತ್ತಿದ್ದು, ಅದರ ಟೀಸರ್ ಕೂಡ ನೆನ್ನೆ ಬಿಡುಗಡೆಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com