ಬೆಂಗಳೂರು: ಮೇ ನಲ್ಲಿ ಚಿತ್ರೀಕರಣ ಪ್ರಾರಂಭವಾದ 'ಸಂಹಾರ' ಚಲನಚಿತ್ರದ ಮೊದಲ ಹಂತದ ಚಿತ್ರೀಕರಣ ಮಂಗಳೂರಿನಲ್ಲಿ ಮುಕ್ತಾಯವಾಗಿದೆ. ಈ ಚಿತ್ರೀಕರಣ ೧೫ ದಿನಗಳವರೆಗೆ ನಡೆದಿತ್ತು. ಗುರು ದೇಶಪಾಂಡೆ ನಿರ್ದೇಶನದ ಈ ಚಿತ್ರದಲ್ಲಿ ಚಿರಂಜೀವಿ ಸರ್ಜಾ, ಹರಿಪ್ರಿಯಾ ಮತ್ತು ಕಾವ್ಯ ಶೆಟ್ಟಿ ಅವರಿಗೆ ನೀಡಿರುವ ಪಾತ್ರಗಳನ್ನು ಗಮನಿಸಿದರೆ, ಇದು ತಮಿಳು ಸಿನೆಮಾ 'ಅದೇ ಕಣ್ಗಳ್' ನಿಂದ ಸ್ಫೂರ್ತಿ ಪಡೆದಿರಬಹುದೇ ಎಂದು ಊಹಿಸಬಹುದಾಗಿದೆ. ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಈ ತಮಿಳು ಸಿನೆಮಾವನ್ನು ರೋಹಿನ್ ವೆಂಕಟೇಶ್ ನಿರ್ದೇಶಿಸಿದ್ದರು.