ಇದೊಂದು 80ರ ದಶಕದ ಕಥೆಯಾಗಿದ್ದು, ರಕ್ಷಿತ್ ಶೆಟ್ಟಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಅಮರಾವತಿ ಎಂಬ ಕಾಲ್ಪನಿಕ ಪಟ್ಟಣದಲ್ಲಿರುವ ಭ್ರಷ್ಟ ಪೊಲೀಸ್ ಆಫೀಸರ್ ಕತೆ ಚಿತ್ರದಲ್ಲಿದೆ. ಪಿರಿಯಾಡಿಕಲ್ ಮೂವಿ ಇದಾಗಿದ್ದು ರಸ್ತೆಗಳಲ್ಲಿ ಬೀದಿ ದೀಪ ಇಲ್ಲದ, ಎಲೆಕ್ಟ್ರಿಕ್ ಲೈಟ್ ಇಲ್ಲದ ದಿನಗಳ ಕಥೆ ಹೆಣೆಯಲಾಗಿದೆ. ಈ ಸಿನಿಮಾಗಾಗಿ ಉತ್ತರ ಕರ್ನಾಟಕದ ಹಲವು ಸ್ಥಳಗಳಲ್ಲಿ ಶೂಟಿಂಗ್ ನಡೆಸಲು ನಿರ್ಧರಿಸಲಾಗಿದೆ. ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿದ್ದು, ಅಚ್ಯುತರಾವ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.