ಅಂತೆಯೇ ಪತ್ರದಲ್ಲಿ, ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತಗಳ ಎಣಿಕೆ ಇದೇ ಡಿಸೆಂಬರ್ 1ರಂದು ನಡೆಯಲಿದ್ದು, ಅದೇ ದಿನ ಪದ್ಮಾವತಿ ಚಿತ್ರ ಬಿಡುಗಡೆಯಾಗುತ್ತಿದೆ. ಇದರಿಂದ ರಾಜ್ಯ ಪೊಲೀಸರ ಮೇಲೆ ಮತ್ತಷ್ಟು ಹೊರೆ ಬೀಳಲಿದೆ ಎಂದು ಹೇಳಿರುವ ಅಧಿಕಾರಿಗಳು, "ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಈಗಾಗಲೇ ಕೇಂದ್ರೀಯ ಪಡೆಗಳಿಗೆ ಮನವಿ ಮಾಡಿಕೊಳ್ಳಲಾಗಿದ್ದು, ಪದ್ಮಾವತಿ ಚಿತ್ರವೂ ಅದೇ ದಿನ ಬಿಡುಗಡೆಯಾದರೆ, ಬೆದರಿಕೆಯ ಹಿನ್ನೆಲೆಯಲ್ಲಿ ಸುರಕ್ಷತೆ ಮತ್ತು ಭದ್ರತೆಯನ್ನು ನಾವು ಖಾತ್ರಿಪಡಿಸಬೇಕಾಗುತ್ತದೆ" ಎಂದು ಹೇಳಿದ್ದಾರೆ.