ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ನಟ ಪ್ರಕಾಶ್ ರೈ, ಪದ್ಮಾವತಿ ಚಿತ್ರತಂಡದ ಬೆಂಬಲಕ್ಕೆ ನಿಂತಿದ್ದು, ಚಿತ್ರ ತಂಡದ ಮೇಲೆ ದಾಳಿ ಮಾಡಬೇಕು ಎನ್ನುವ ಸಂಘಟನೆಯ ನಡೆ ಸರಿಯಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಪೋಸ್ಟ್ ಒಂದರಲ್ಲಿ, "ಒಬ್ಬರು ಮೂಗು ಕತ್ತರಿಸಬೇಕೆಂದಿದ್ದರೆ, ಇನ್ನೊಬ್ಬರು ಕಲಾವಿದರೊಬ್ಬರ ತಲೆ ಕಡಿಯಬೇಕೆಂದಿದ್ದಾರೆ, ಮತ್ತೊಬ್ಬರು ನಟರೊಬ್ಬರನ್ನು ಗುಂಡಿಕ್ಕಬೇಕೆಂದಿದ್ದಾರೆ, ತೀರ್ಪುಗಾರರಿಂದ ಆರಿಸಲ್ಪಟ್ಟ ಕೆಲ ಚಲನಚಿತ್ರಗಳನ್ನು ಚಿತ್ರೋತ್ಸವದಿಂದ ತೆಗೆದು ಹಾಕಬೇಕೆಂದು ವ್ಯವಸ್ಥೆ ಬಯಸಿದೆ. ಆದರೂ ಅಸಹಿಷ್ಣುತೆಯ ಕೃತ್ಯಗಳಿಲ್ಲವೆಂದು ನಾವು ನಂಬಬೇಕೆಂದು ನೀವು ಬಯಸಿದ್ದೀರಿ, ಧ್ವನಿಗಳ ಅಡಗಿಸುವ ಕಾರ್ಯ ನಡೆಯುತ್ತಿದ್ದು, ಭಯಭೀತಗೊಳಿಸಲಾಗುತ್ತಿದೆ.. #ಜಸ್ಟ್ ಆಸ್ಕಿಂಗ್'' ಎಂದು ರೈ ಟ್ವೀಟ್ ಮಾಡಿದ್ದಾರೆ.