ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ತ್ರಿಶಾ, 'ನನಗೆ ದೊರೆತ ಈ ಮಾನ್ಯತೆ ನಿಜಕ್ಕೂ ಖುಷಿ ತಂದಿದೆ. ತಮಿಳುನಾಡು ಹಾಗೂ ಕೇರಳದ ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ರಕ್ಷಣೆಗೆ ಸದಾ ಬದ್ಧಳಾಗಿರುತ್ತೇನೆ. ಜ್ವಲಂತ ಸಮಸ್ಯೆಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿ, ಆರೋಗ್ಯಯುತ ಸಮಾಜಕ್ಕಾಗಿ ಕೈ ಜೋಡಿಸುವೆ' ಎಂದಿದ್ದಾರೆ.