ಚೆಲುವಿನ ಚಿತ್ತಾರ ನಟ 'ಬುಲ್ಲಿ ಪಪ್ಪುಸಿ' ಖ್ಯಾತಿಯ ರಾಕೇಶ್ ಇನ್ನಿಲ್ಲ

ಚೆಲುವಿನ ಚಿತ್ತಾರದಲ್ಲಿ ಬುಲ್ಲಿಯಾಗಿ ಕಾಣಿಸಿಕೊಂಡಿದ್ದ ನಟ ರಾಕೇಶ್ ಅವರು ಅಕಾಲಿಕವಾಗಿ ನಿಧನ ಹೊಂದಿದ್ದಾರೆಂದು ತಿಳಿದುಬಂದಿದೆ...
ನಟ ರಾಕೇಶ್
ನಟ ರಾಕೇಶ್
ಬೆಂಗಳೂರು: ಚೆಲುವಿನ ಚಿತ್ತಾರದಲ್ಲಿ ಬುಲ್ಲಿಯಾಗಿ ಕಾಣಿಸಿಕೊಂಡಿದ್ದ ನಟ ರಾಕೇಶ್ ಅವರು ಅಕಾಲಿಕವಾಗಿ ನಿಧನ ಹೊಂದಿದ್ದಾರೆಂದು ತಿಳಿದುಬಂದಿದೆ. 
ಗ್ಯಾಂಗ್ ರಿನ್ ಸಮಸ್ಯೆಯಿಂದ ಬಳಲುತ್ತಿದ್ದ ರಾಕೇಶ್ ಅವರು 2 ತಿಂಗಳ ಹಿಂದಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಕೋರಮಂಗಲದ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ 7.30ರ ಸುಮಾರಿಗೆ ವಿಧಿವಶರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಬುಲ್ಲಿ-ಪಪ್ಪುಸಿ ಎನ್ನುವ ಹೆಸರಿನಲ್ಲಿ ರಾಕೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತಿ ಪಡೆದುಕೊಂಡಿದ್ದರು. ಧೂಮಪಾನ ಸಿನಿಮಾದಲ್ಲಿ ನಾಯಕ ನಟರಾಗಿ ರಾಕೇಶ್ ನಟಿಸುತ್ತಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com