ಚೆಲುವಿನ ಚಿತ್ತಾರ ನಟ 'ಬುಲ್ಲಿ ಪಪ್ಪುಸಿ' ಖ್ಯಾತಿಯ ರಾಕೇಶ್ ಇನ್ನಿಲ್ಲ

ಚೆಲುವಿನ ಚಿತ್ತಾರದಲ್ಲಿ ಬುಲ್ಲಿಯಾಗಿ ಕಾಣಿಸಿಕೊಂಡಿದ್ದ ನಟ ರಾಕೇಶ್ ಅವರು ಅಕಾಲಿಕವಾಗಿ ನಿಧನ ಹೊಂದಿದ್ದಾರೆಂದು ತಿಳಿದುಬಂದಿದೆ...
ನಟ ರಾಕೇಶ್
ನಟ ರಾಕೇಶ್
Updated on
ಬೆಂಗಳೂರು: ಚೆಲುವಿನ ಚಿತ್ತಾರದಲ್ಲಿ ಬುಲ್ಲಿಯಾಗಿ ಕಾಣಿಸಿಕೊಂಡಿದ್ದ ನಟ ರಾಕೇಶ್ ಅವರು ಅಕಾಲಿಕವಾಗಿ ನಿಧನ ಹೊಂದಿದ್ದಾರೆಂದು ತಿಳಿದುಬಂದಿದೆ. 
ಗ್ಯಾಂಗ್ ರಿನ್ ಸಮಸ್ಯೆಯಿಂದ ಬಳಲುತ್ತಿದ್ದ ರಾಕೇಶ್ ಅವರು 2 ತಿಂಗಳ ಹಿಂದಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಕೋರಮಂಗಲದ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ 7.30ರ ಸುಮಾರಿಗೆ ವಿಧಿವಶರಾಗಿದ್ದಾರೆಂದು ವರದಿಗಳು ತಿಳಿಸಿವೆ. 
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಬುಲ್ಲಿ-ಪಪ್ಪುಸಿ ಎನ್ನುವ ಹೆಸರಿನಲ್ಲಿ ರಾಕೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಖ್ಯಾತಿ ಪಡೆದುಕೊಂಡಿದ್ದರು. ಧೂಮಪಾನ ಸಿನಿಮಾದಲ್ಲಿ ನಾಯಕ ನಟರಾಗಿ ರಾಕೇಶ್ ನಟಿಸುತ್ತಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com