ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಮಂಜು ಅವರನ್ನು ಬೆಳ್ಳಿ ತೆರೆ ಗೆ ಪರಿಚಯಿಸಲು ಸಿದ್ದತೆಗಳು ಪ್ರಾರಂಭವಾಗಿದೆ ಎಂದು ಗಾಂಧಿನಗರದಲ್ಲಿ ಸುದ್ದಿಯೊಂದು ಹರಿದಾಡುತ್ತಿತ್ತು, ಅದಕ್ಕೀಗ ಸ್ಪಷ್ಟ ರೂಪ ಸಿಕ್ಕಿದ್ದು ಯುವ ಪ್ರತಿಭೆ ಶ್ರೇಯಸ್, ನೃತ್ಯ ನಿರ್ದೇಶಕ ಇಮ್ರಾನ್ ಸರ್ಧಾರಿಯಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ನೂತನ ಚಿತ್ರಕ್ಕೆ ಆಯ್ಕೆ ಆಗಿದ್ದಾರೆ.