ಮುಂಬೈನಲ್ಲಿ ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ

ಸ್ಯಾಂಡಲ್ವುಡ್ ನ ಅದ್ಧೂರಿ ಬಜೆಟ್ ಚಿತ್ರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ನಿರ್ಮಿಸಿದ್ದ ಆನಂದ್ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ...
ಆನಂದ್ ಅಪ್ಪುಗೋಳ್
ಆನಂದ್ ಅಪ್ಪುಗೋಳ್
ಮುಂಬೈ: ಸ್ಯಾಂಡಲ್ವುಡ್ ನ ಅದ್ಧೂರಿ ಬಜೆಟ್ ಚಿತ್ರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ನಿರ್ಮಿಸಿದ್ದ ಆನಂದ್ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿ ಪ್ರಕರಣ ಸಂಬಂಧ ಸಾರ್ವಜನಿಕರ ಠೇವಣಿ ಹಣವನ್ನು ಮರುಪಾವತಿ ಮಾಡದೇ ತಲೆಮರೆಸಿಕೊಂಡಿದ್ದ ಆರೋಪದ ಮೇಲೆ ಪೊಲೀಸರು ಆನಂದ್ ಅಪ್ಪುಗೋಳ್ ಅವರನ್ನು ಬಂಧಿಸಿದ್ದಾರೆ. 
ಸಹಕಾರಿ ಬ್ಯಾಂಕ್ ಕಚೇರಿಗೆ ಬೀಗ ಹಾಕಿ ಠೇವಣಿದಾರರಿಗೆ ಮೋಸ ಮಾಡಿದ್ದಾರೆ ಎಂದು ಆನಂದ್ ಅಪ್ಪುಗೋಳ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ವಿರುದ್ಧ ಸಾರ್ವಜನಿಕರು ದೂರು ದಾಖಲಿಸಿದ್ದರು. 
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ಆನಂದ್ ಅಪ್ಪುಗೋಳ್ ನಿರ್ಮಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com