ಸ್ವಚ್ಛತೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬಾಹುಬಲಿ ಪ್ರಭಾಸ್‌ ಸ್ಫೂರ್ತಿದಾಯಕ ಸಂದೇಶ: ಅಭಿಮಾನಿಗಳು ಫಿದಾ

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅವರ ಅಭಿಮಾನಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. ...
ಪ್ರಭಾಸ್
ಪ್ರಭಾಸ್
ಮುಂಬಯಿ: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಅವರ ಅಭಿಮಾನಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. 
ಮಹಾತ್ಮ ಗಾಂಧೀಜಿಯವರು ದೇಶದ ಸ್ವಚ್ಛತೆಗಾಗಿ ಶ್ರಮಿಸಿದ್ದರು. ಈ ಬಾರಿ ನಡೆಯಲಿರುವ ಸ್ವಚ್ಛ ಭಾರತ್ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತಿದ್ದೇನೆ. ಕೆಲವೊಮ್ಮೆ ವೈಯಕ್ತಿಕವಾಗಿ ಈ ವಿಷಯದ ಬಗ್ಗೆ ಯೋಚಿಸುತ್ತೇನೆ. ದೇಶದ ನಾಗರಿಕನಾಗಿ ಇದು ನಮ್ಮ ಕರ್ತವ್ಯ ಮಾತ್ರ ಅಲ್ಲ ಇದು ಹವ್ಯಾಸ ಆಗಬೇಕೆಂದು ಅವರು ಹೇಳಿದ್ದಾರೆ.
ಈ ರೀತಿಯ ಯೋಚನೆ ಮಾಡುವ ನಾವೆಲ್ಲ ಸೇರಿಕೊಂಡು ಭಾರತವನ್ನು ಸ್ವಚ್ಛವಾಗಿ ಇಡೋಣ ಹಾಗೂ ನಾವೆಲ್ಲರೂ ಜೊತೆಯಾಗಿದ್ದರೆ ಭಾರತವನ್ನು ಇನ್ನಷ್ಟು ಸುಂದರವಾಗಿಸಬಹುದು ಎಂದು ಪ್ರಭಾಸ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com