ಖಾಸಗಿ ಸಂದರ್ಶನ ವೊಂದರಲ್ಲಿ ನಿರ್ದೇಶಕ ಅನೂಪ್ ಭಂಡಾರಿ, ನಿರೂಪ್ ಭಂಡಾರಿ ಹಾಗು ನಟಿ ಆವಂತಿಕಾ ಶೆಟ್ಟಿ ಪಾಲ್ಗೊಂಡಿದ್ದರು. ಈ ವೇಳೆ ನಿರೂಪಕರು ಕೇಳಿದ ರಾಜರಥ ಸಿನಿಮಾ ವೀಕ್ಷಿಸದ ಪ್ರೇಕ್ಷಕರು ಎಂಬ ಪ್ರಶ್ನೆಗೆ ಉತ್ತರಿಸಿದ ನಿರ್ದೇಶಕ ಅನೂಪ್ ಭಂಡಾರಿ, ಕಚಡಾ ನನ್ನ ಮಕ್ಕಳು ಎಂದು ಹೇಳಿಕೆ ನೀಡಿದ್ದರು. ಈ ಮಾತಿನ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿ, ಭಂಡಾರಿ ಸಹೋದರರ ವಿರುದ್ಧ ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು.