ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ತಮಿಳುನಾಡಿನ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಕಾವೇರಿ ನೀರಿನ ವಿಷಯದಲ್ಲಿ ತಮಿಳುನಾಡು ಮೊದಲಿನಿಂದಲೂ ಅಸಹನೆ, ಅಸಹಕಾರ ತೋರುತ್ತಿದೆ. ಈಗ ಮತ್ತೆ ತಮಿಳುನಾಡು ಬಂದ್ ಆಚರಿಸಿದ್ದಲ್ಲದೆ ಮುಖಂಡರು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಈಗ ನಮ್ಮ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪ ಬರುತ್ತಿರುವುದರಿಂದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಡುತ್ತಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಆದರೆ ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿರಲಿ, ಏನೇ ಪರಿಹಾರ ಸೂಚಿಸಿರಲಿ ಆ ಬಗ್ಗೆ ತಮಿಳುನಾಡು ಕ್ಯಾತೆ ತೆಗೆಯುತ್ತಲೇ ಬಂದಿದೆ. ಕೇಂದ್ರ ಮಾತ್ರವಲ್ಲ, ಸುಪ್ರೀಂಕೋರ್ಟ್ಆದೇಶಕ್ಕೂ ಅಲ್ಲಿನ ರಾಜಕಾರಣಿಗಳು ಅಪಸ್ವರ ಎತ್ತುತ್ತಾರೆ,.