ಸಂಗೀತ ನಿರ್ದೇಶಕ ಹಂಸಲೇಖಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಗೀತ ನಿರ್ದೇಶಕ ಹಂಸಲೇಖ
ಸಂಗೀತ ನಿರ್ದೇಶಕ ಹಂಸಲೇಖ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ವಾಹಿಸಿ ರಿಯಾಲಿಟಿ ಶೋ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಗ್ಯಾಸ್ಟಿಕ್‍ನಿಂದ ಎದೆನೋವು ಕಾಣಿಸಿಕೊಂಡಿದ್ದು ಅಭಿಮಾನಿಗಳು ಆತಂಕಗೊಳ್ಳಬೇಕಾಗಿಲ್ಲ ಎಂದು ಕಾರ್ಯಕ್ರಮ ನಿರ್ವಾಹಕರು ಸ್ಪಷ್ಟನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com