ಮಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದಿಂದ ಈ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುತ್ತಿದ್ದೇನೆ. ಆದರೆ ಮತದಾರರಿಗೆ ಮತ ಹಾಕಲು ಡ್ರಿಂಕ್ಸ್ ಕೊಡಲ್ಲ, ಸೀರೆ ಹಂಚಲ್ಲ, ಮತವನ್ನು ಬೇಡಲ್ಲ, ಕೈಯಂತೂ ಮುಗಿಯಲ್ಲ, ಮನೆ ಮನೆಗೆ ಕ್ಯಾನ್ವಾಸ್ ಮಾಡಲ್ಲ. ಕ್ಷೇತ್ರಕ್ಕೆ ಏನು ಬೇಕು, ಏನು ಮಾಡಬೇಕು ತಿಳಿದುಕೊಂಡರೆ ಸಾಕು ಎಂದು ನಟ ಹುಚ್ಚ ವೆಂಕಟ್ ಹೇಳಿದ್ದಾರೆ.