ಅಪೂರ್ವ ನಂತರ ಯಾವುದೇ ಸಿನಿಮಾಗಳಲ್ಲಿ ನಟಿಸಲು ಅಪೂರ್ವ ಆಸಕ್ತಿ ಹೊಂದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು, ಉತ್ತಮ ಪ್ರಾಜೆಕ್ಟ್ ಗಾಗಿ ಕಾಯುತ್ತಿದ್ದ ಆಕೆ ನಟನೆಗೆ ತಯಾರಿ ಮಾಡಿಕೊಳ್ಳುತ್ತಿದ್ದರು, ಆದರೆ ರಾಜೇಂದ್ರ ಪೊನ್ನಪ್ಪ ಸಿನಿಮಾದಲ್ಲಿ ನಟಿಸಲು ಅಪೂರ್ವ ಎರಡನೇ ಮಾತಿಲ್ಲದೇ ಒಪ್ಪಿಕೊಂಡಿದ್ದಾರೆ, ಏಕೆಂದರೇ ರವಿಚಂದ್ರನ್ ಅಪೂರ್ವ ಅವರ ಗಾಡ್ ಫಾದರ್ ಆಗಿರುವ ಕಾರಣ ವಕೀಲೆ ಪಾತ್ರಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.