ಅಪೂರ್ವ ಮತ್ತು ರವಿಚಂದ್ರನ್
ಸಿನಿಮಾ ಸುದ್ದಿ
ರವಿಚಂದ್ರನ್ ನಿರ್ದೇಶನದ 'ರಾಜೇಂದ್ರ ಪೊನ್ನಪ್ಪ' ಸಿನಿಮಾದಲ್ಲಿ ವಕೀಲೆಯಾಗಿ ಅಪೂರ್ವ
ರವಿಚಂದ್ರನ್ ಅವರ ಅಪೂರ್ವ ಸಿನಿಮಾಗೆ ನಾಯಕಿಯಾಗಿದ್ದ ನಟಿ ಅಪೂರ್ವ ಎರಡು ವರ್ಷಗಳ ನಂತರ ನಟನೆಯತ್ತ ಮುಖ ಮಾಡಿದ್ದಾರೆ....
ಬೆಂಗಳೂರು: ರವಿಚಂದ್ರನ್ ಅವರ ಅಪೂರ್ವ ಸಿನಿಮಾಗೆ ನಾಯಕಿಯಾಗಿದ್ದ ನಟಿ ಅಪೂರ್ವ ಎರಡು ವರ್ಷಗಳ ನಂತರ ನಟನೆಯತ್ತ ಮುಖ ಮಾಡಿದ್ದಾರೆ.
ಕ್ರೇಜಿಸ್ಟಾರ್ ರವಿಚಂದ್ರನ್ ನಿರ್ದೇಶನದ ರಾಜೇಂದ್ರ ಪೊನ್ನಪ್ಪ ಸಿನಿಮಾದಲ್ಲಿ ವಕೀಲೆಯಾಗಿ ರವಿಚಂದ್ರನ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ, ರಾಧಿಕಾ ಕುಮಾರಸ್ವಾಮಿ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಈಶ್ವರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ.
ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ರವಿಚಂದ್ರನ್ ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಸದ್ಯ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಮುಂದಿನ 10 ದಿನಗಳಲ್ಲಿ ಅಪೂರ್ವ ಸಿನಿಮಾ ಸೆಟ್ ಗೆ ಬರಲಿದ್ದಾರೆ.
ಅಪೂರ್ವ ನಂತರ ಯಾವುದೇ ಸಿನಿಮಾಗಳಲ್ಲಿ ನಟಿಸಲು ಅಪೂರ್ವ ಆಸಕ್ತಿ ಹೊಂದಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು, ಉತ್ತಮ ಪ್ರಾಜೆಕ್ಟ್ ಗಾಗಿ ಕಾಯುತ್ತಿದ್ದ ಆಕೆ ನಟನೆಗೆ ತಯಾರಿ ಮಾಡಿಕೊಳ್ಳುತ್ತಿದ್ದರು, ಆದರೆ ರಾಜೇಂದ್ರ ಪೊನ್ನಪ್ಪ ಸಿನಿಮಾದಲ್ಲಿ ನಟಿಸಲು ಅಪೂರ್ವ ಎರಡನೇ ಮಾತಿಲ್ಲದೇ ಒಪ್ಪಿಕೊಂಡಿದ್ದಾರೆ, ಏಕೆಂದರೇ ರವಿಚಂದ್ರನ್ ಅಪೂರ್ವ ಅವರ ಗಾಡ್ ಫಾದರ್ ಆಗಿರುವ ಕಾರಣ ವಕೀಲೆ ಪಾತ್ರಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ