ವಿಷ್ಣು ಹೆಸರಲ್ಲಿ ಫಿಲಂ ಇನ್ಸ್ಟಿಟ್ಯೂಟ್ ಏಕಿಲ್ಲ: ಸರ್ಕಾರದ ವಿರುದ್ಧ ಅನಿರುದ್ಧ್ ಮತ್ತೆ ಗರಂ

ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ...
ನಟ ಅನಿರುದ್ಧ್
ನಟ ಅನಿರುದ್ಧ್
Updated on
ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ. 
ವಿಷ್ಣು ಸ್ಮಾರಕ ವಿಚಾರದಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಜೊತೆಗೆ ಹಿರಿಯ ನಟರಾದ ರಾಜ್ ಕುಮಾರ್, ಅಂಬರೀಷ್ ಹೆಸರಿನಲ್ಲಿ ಫಿಲ್ಮ್ ಇನ್ಸ್ಟಿಟ್ಯೂಟ್ ಮಾಡಲಾಗುವುದು ಎಂದು ಹೇಳುವ ಸರ್ಕಾರ, ವಿಷ್ಣುವರ್ಧನ್ ಹೆಸರಿನಲ್ಲಿ ಏಕೆ ಫಿಲ್ಮ್ ಇನ್ಸ್'ಟಿಟ್ಯೂಟ್ ಮಾಡುತ್ತೇನೆಂದು ಹೇಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಗ್ಗೆ ನನಗ್ಯಾವ ಕೋಪವೂ ಇಲ್ಲ. ಅವರ ಮೇಲೆ ಭರವಸೆಯಿದೆ. ಹಾಗೆಯೇ ನನ್ನ ಹೇಳಿಕೆ ವೈಯಕ್ತಕವೂ ಆಗಿರಲಿಲ್ಲ. ಆದರೆ, ವಿಷ್ಣು ಸ್ಮಾರಕ ವಿಚಾರವನ್ನು ಅವರು ಗಂಭೀರವಾಗಿ ಪರಿಗಣಿಸಿಲ್ಲ. ಅಂಬರೀಷ್ ಅವರ ಶ್ರದ್ಧಾಂಜಲಿ ಸಭೆಯಲ್ಲೂ ಅವರು ವಿಷ್ಣು ಸ್ಮಾರಕ ವಿಚಾರವನ್ನು ಪ್ರಸ್ತಾಪಿಸಿಲ್ಲ. ಅದೇ ನನಗೆ ನೋವು ತಂದಿದೆ ಎಂದು ತಿಳಿಸಿದರು. 
ಈ ನಡುವೆ ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಿಸುವ ಸಂಬಂಧ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕುಮಾರಸ್ವಾಮಿಯವರು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com