ಇನ್ನು ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರು, ನಟ ದುನಿಯಾ ವಿಜಿ ಪತ್ನಿ ನಾಗರತ್ನಾ ದೂರು ಕೊಟ್ಟಿದ್ದಾರೆ. ದೂರಿನ ಜೊತೆಗೆ ಒಂದು ಗಂಟೆ ಕಾಲ ಮಾತನಾಡಿದ್ದಾರೆ. ಇದು ಕೋರ್ಟ್ ಕೇಸ್ ಆಗಿದ್ದು,ಗಂಭೀರ ಪ್ರಕರಣವಾಗಿದೆ. ಯಾವುದೇ ಕಾರಣಕ್ಕೂ ಡಿವೋರ್ಸ್ ಕೊಡುವುದಿಲ್ಲ, ಹೀಗಾಗಿ ನನಗೆ ನ್ಯಾಯ ಕೊಡಿಸಿ. ಮಕ್ಕಳು ಡಿಪ್ರೆಷನ್ ಗೆ ಹೋಗಿದ್ದಾರೆ. ಹೀಗಾಗಿ ದಯವಿಟ್ಟು ನ್ಯಾಯ ಕೊಡಿಸಿ ಎಂದು ನಾಗರತ್ನಾ ಮನವಿ ಮಾಡಿದ್ದಾರೆ. ಹೀಗಾಗಿ ಕೆಲವೇ ದಿನಗಳಲ್ಲಿ ದುನಿಯಾ ವಿಜಿಯವರನ್ನ ಕರೆಸಿ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದರು.