ಅರ್ಧ ಶತಕ ಪೂರೈಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 53ನೇ ಚಿತ್ರದ ಟೈಟಲ್ ಕ್ರಿಸ್ಮಸ್ ಹಬ್ಬದಂದು ಲಾಂಚ್ ಆಗಲಿದೆ.
ದರ್ಶನ್ ಅಭಿನಯದ 53ನೇ ಚಿತ್ರವನ್ನು ನಿರ್ದೇಶಕ ತರುಣ್ ಸುದೀರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಛಾಯಾಗ್ರಾಹಣವನ್ನು ಸುಧಾಕರ್ ಎಸ್ ರಾಜ್ ಮಾಡುತ್ತಿದ್ದು ಚಿತ್ರದ ಚಿತ್ರೀಕರಣಕ್ಕಾಗಿ ಚಿತ್ರ ತಂಡ ಉತ್ತರಪ್ರದೇಶದಲ್ಲಿ ಕೆಲ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಬಂದಿದೆ.
ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಅವರು ಬಂಡವಾಳ ಹೂಡುತ್ತಿದ್ದು ಕ್ರಿಸ್ ಮಸ್ ಗೆ ಚಿತ್ರದ ಟೈಟಲ್ ಬಿಡುಗಡೆಯಾಗಲಿದ್ದು ಸಂಕ್ರಾಂತಿ ಹಬ್ಬದಂದು ಚಿತ್ರದ ಮುಹೂರ್ತ ನೆರವೇರಲಿದೆ.
ಇನ್ನು ಯಜಮಾನ ಚಿತ್ರದ ಹಾಡಿನ ಚಿತ್ರೀಕರಣ ಬಾಕಿ ಇದ್ದು ಇದಾದ ನಂತರ ದರ್ಶನ್ ಒಡೆಯ ಚಿತ್ರದಲ್ಲಿ ನಟಿಸಲಿದ್ದಾರೆ. ಸದ್ಯ ಮುನಿರತ್ನ ಕುರುಕ್ಷೇತ್ರ ಚಿತ್ರ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.
ಮುಂದಿನ ವರ್ಷ ರಾಕ್ಲೇನ್ ವೆಂಕಟೇಶ್ ನಿರ್ಮಾಣದ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಗಂಡುಗಲಿ ಮದಕರಿ ನಾಯಕ ಚಿತ್ರದಲ್ಲೂ ದರ್ಶನ್ ಅಭಿನಯಿಸಲಿದ್ದು ಚಿತ್ರ ಮುಂದಿನ ವರ್ಷ ಸೆಟ್ಟೇರಲಿದೆ.