ಖುಲಾಯಿಸಿದ ಅದೃಷ್ಟ: ಐತಿಹಾಸಿಕ ಚಿತ್ರದಲ್ಲಿ ನಟಿ ಹರಿಪ್ರಿಯಾ?

ವಿಕ್ಟರಿ 2 ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ಹರಿ ಸಂತೋಷ್ ಐತಿಹಾಸಿಕ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದು ಈ ಚಿತ್ರದಲ್ಲಿ ನಟಿ ಹರಿಪ್ರಿಯಾ ನಟಿಸಲಿದ್ದಾರೆ ಎಂದು ಹೇಳಲಾಗಿದೆ...
ಹರಿಪ್ರಿಯಾ
ಹರಿಪ್ರಿಯಾ
ವಿಕ್ಟರಿ 2 ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ಹರಿ ಸಂತೋಷ್ ಐತಿಹಾಸಿಕ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದು ಈ ಚಿತ್ರದಲ್ಲಿ ನಟಿ ಹರಿಪ್ರಿಯಾ ನಟಿಸಲಿದ್ದಾರೆ ಎಂದು ಹೇಳಲಾಗಿದೆ.
ಬಿಎಲ್ ವೇಣು ಅವರ ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕ ಕಾದಂಬರಿ ಆಧಾರಿತ ಚಿತ್ರವನ್ನು ಹರಿ ಸಂತೋಷ್ ನಿರ್ದೇಶನ ಮಾಡುತ್ತಿದ್ದು ಚಿತ್ರಕ್ಕೆ ಬಿಚ್ಚುಗತ್ತಿ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರದ ಮೊದಲ ಭಾಗವಾದ ದಳವಾಯಿ ದಂಗೆಯಲ್ಲಿ ಹರಿಪ್ರಿಯಾ ನಟಿಸುವ ಸಾಧ್ಯತೆ ಇದೆ. 
ರಾಜಾವರ್ಧನ ನಾಯಕನಾಗಿ ಅಭಿನಯಿಸುತ್ತಿದ್ದು ಚಿತ್ರದ ನಾಯಕಿ ಪಾತ್ರದ ಅನ್ವೇಷಣೆಯಲ್ಲಿದ್ದ ನಿರ್ದೇಶಕರ ಕಣ್ಣಿಗೆ ಹರಿಪ್ರಿಯಾ ಬಿದ್ದಿದ್ದಾರೆ. ಇದೊಂದು ಐತಿಹಾಸಿಕ ಚಿತ್ರವಾಗಿದ್ದರಿಂದ ಈ ಪಾತ್ರಕ್ಕೆ ಹರಿಪ್ರಿಯಾ ಸೂಕ್ತ ಎಂದು ನಿರ್ದೇಶಕರು ಹರಿಪ್ರಿಯಾ ಜತೆ ಮಾತುಕತೆ ನಡೆಸಿದ್ದಾರೆ. ಚಿತ್ರದ ಪಾತ್ರದ ಕುರಿತಂತೆ ಹರಿಪ್ರಿಯಾ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com