ಕಂಠಸಿರಿಗೆ ಮನಸೋತ ವೃದ್ಧ: 'ಸರಿಗಮಪ' ಋತ್ವಿಕ್ ಗೆ ಕಣ್ಣು ದಾನ ಮಾಡಲು ಮುಂದಾದ ಬಳ್ಳಾರಿ ವ್ಯಕ್ತಿ

ಕನ್ನಡ ಭಾಷೆಯ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪದಲ್ಲಿ ತನ್ನ ಹಾಡಿನಿಂದಲೇ ಎಲ್ಲರ ಗಮನ ಸೆಳೆದಿರುವ ಋತ್ವಿಕ್ ಕಂಠಸಿರಿಗೆ ಮನಸೋತಿರುವ ವೃದ್ಧರೊಬ್ಬರು,...
ಋತ್ವಿಕ್
ಋತ್ವಿಕ್
Updated on
ಬೆಂಗಳೂರು: ಕನ್ನಡ ಭಾಷೆಯ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪದಲ್ಲಿ ತನ್ನ ಹಾಡಿನಿಂದಲೇ ಎಲ್ಲರ ಗಮನ ಸೆಳೆದಿರುವ ಋತ್ವಿಕ್ ಕಂಠಸಿರಿಗೆ ಮನಸೋತಿರುವ ವೃದ್ಧರೊಬ್ಬರು, ತಮ್ಮ ಕಣ್ಣುಗಳನ್ನು ಗಾಯಕನಿಗೆ ದಾನ ಮಾಡಲು ಮುಂದಾಗಿದ್ದಾರೆ.
ಸರಿಗಮಪ ಕಾರ್ಯಕ್ರಮದಲ್ಲಿ ಕಣ್ಣುಗಳು ಇಲ್ಲದಿದ್ದರೂ ತಮ್ಮ ಕಂಠಸಿರಿಯಿಂದಲೇ ಎಲ್ಲರ ಕಣ್ಮನ ಸೆಳೆದಿರುವ ಗಾಯಕ ಋತ್ವಿಕ್ ಗೆ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ 74 ವರ್ಷದ ವೃದ್ಧ ಸಿದ್ದಲಿಂಗನಗೌಡ ನೇತ್ರದಾನ ಮಾಡಲು ಮುಂದಾಗಿದ್ದಾರೆ. 
ದೃಷ್ಟಿ ವಿಕಲ ಚೇತನರಾಗಿದ್ದರೂ ತಮ್ಮ ಅದ್ಭುತ ಕಂಠಸಿರಿಯಿಂದಲೇ ಅಪಾರ ಅಭಿಮಾನಿಗಳನ್ನು ಋತ್ವಿಕ್ ಗಳಿಸಿದ್ದಾರೆ. ಹಾಡುಗಳನ್ನು ಕೇಳುತ್ತಾ ಅವರ ಅಭಿಮಾನಿಯಾದ ಕೊಟ್ಟೂರಿನ ಸಿದ್ದಲಿಂಗನಗೌಡ ಕಣ್ಣುಗಳನ್ನ ದಾನ ಮಾಡಲು ಹಠ ಹಿಡಿದಿದ್ದಾರೆ. ಅದಕ್ಕಾಗಿ ಸಿದ್ದಲಿಂಗನಗೌಡ ಸಿಕ್ಕ ಸಿಕ್ಕವರಲ್ಲಿ ತನ್ನ ಕಣ್ಣು ದಾನದ ಆಸೆ ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com