ಕೊಲ್ಲೂರು ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ, 'ಕೆಜಿಎಫ್' ಯಶಸ್ಸಿಗಾಗಿ ವಿಶೇಷ ಪೂಜೆ

: ರಾಕಿಂಗ್ ಸ್ಟಾರ್ ಯಶ್ ಭಾನುವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ....
ಕೊಲ್ಲೂರಿನಲ್ಲಿ ಯಶ್
ಕೊಲ್ಲೂರಿನಲ್ಲಿ ಯಶ್
ಕುಂದಾಪುರ: ರಾಕಿಂಗ್ ಸ್ಟಾರ್ ಯಶ್ ಭಾನುವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ಯಶ್ ಹಾಗೂ "ಕೆಜಿಎಫ್" ಚಿತ್ರತಂಡ ಮೂಕಾಂಬಿಕೆ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದೆ.
ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ "ಕೆಜಿಎಫ್" ಈ ವಾರ (ಡಿಸೆಂಬರ್ 21)ಕ್ಕೆ ಬಿಡುಗಡೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಯಶ್ ತಂಡದ ಜತೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.
ಶನಿವಾರ ರಾತ್ರಿ ಬೆಂಗಳೂರಿನಿಂದ ಹೊರಟ ತಂಡ ಭಾನುವಾರ ಬೆಳಿಗ್ಗೆ ಕೊಲ್ಲೂರಿಗೆ ಆಗಮಿಸಿದ್ದು ಇಲ್ಲಿನ ಪೂಜೆ ಮುಗಿಸಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದೆ.
ನಟ ಯಶ್, ನಿರ್ಮಾಪಕ ವಿಜಯ್ ಕಿರಗಂದೂರ್ ಹಾಗೂ ಸ್ನೇಹಿತರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿರುವ ಚಿತ್ರದ  "ಗಲಿ ಗಲಿ" ಹಾಡು ಇದಾಗಲೇ  ಮೊದಲ ದಿನವೇ 13 ಮಿಲಿಯನ್ ವ್ಯೂ ಪಡೆದು ದಾಖಲೆ ನಿರ್ಮಿಸಿದೆ. ಶುಕ್ರವಾರ "ಕೆಜಿಎಫ್" ಚಿತ್ರ ಪಂಚ ಭಾಷೆಗಳಲ್ಲಿ ತೆರೆ ಕಾಣತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com