ನಾನು ಎಲ್ಲೇ ಹೋದರೂ ಈ ಸ್ವಚ್ಛತೆ, ಶುದ್ಧೀಕರಣ ಮುಂದುವರಿಸುತ್ತೀರಾ?: ಬಿಜೆಪಿಗೆ ಪ್ರಕಾಶ್‌ ರೈ ಪ್ರಶ್ನೆ

ನಾನು ಎಲ್ಲಿಗೇ ಹೋದರೂ ಈ ಸ್ವಚ್ಛತೆ ಮತ್ತು ಶುದ್ಧೀಕರಣ ಸೇವೆಯನ್ನು ನೀವು ಹೀಗೆಯೇ ಮುಂದುವರಿಸುತ್ತೀರಾ? ಎಂದು ದಕ್ಷಿಣ ಭಾರತದ ಖ್ಯಾತ....
ಪ್ರಕಾಶ್ ರೈ
ಪ್ರಕಾಶ್ ರೈ
Updated on
ಬೆಂಗಳೂರು: ನಾನು ಎಲ್ಲಿಗೇ ಹೋದರೂ ಈ ಸ್ವಚ್ಛತೆ ಮತ್ತು ಶುದ್ಧೀಕರಣ ಸೇವೆಯನ್ನು ನೀವು ಹೀಗೆಯೇ ಮುಂದುವರಿಸುತ್ತೀರಾ? ಎಂದು ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್‌ ರೈ ಅವರು ಮಂಗಳವಾರ ಬಿಜೆಪಿ ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ.
ಕಳೆದ ಶನಿವಾರ ಶಿರಸಿಯ ರಾಘವೇಂದ್ರ ಮಠದಲ್ಲಿ ಪ್ರಕಾಶ್ ರೈ ಅವರು ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆ ಹಾಗೂ ಮಠದ ಆವರಣವನ್ನು ಬಿಜೆಪಿ ಕಾರ್ಯಕರ್ತರು ನಿನ್ನೆ ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದರು. ಈ ಕುರಿತು ಇಂದು ಟ್ವೀಟ್ ಮಾಡಿರುವ ಪ್ರಕಾಶ್ ರೈ,  ನಾನು ಶಿರಸಿ ಪಟ್ಟಣದಲ್ಲಿ ಮಾತನಾಡಿದ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸಿ, ಶುದ್ಧೀಕರಿಸುತ್ತಿದ್ದಾರೆ... ಹಸುವಿನ ಮೂತ್ರವನ್ನು(ದೈವಿಕ ಗೋಮೂತ್ರ) ಚಿಮುಕಿಸುವ ಮೂಲಕ......, ನಾನು ಎಲ್ಲಿಗೇ ಹೋಗುತ್ತಿದ್ದರೂ ಈ ಶುದ್ಧೀಕರಣ ಮತ್ತು ಸ್ವಚ್ಛತೆ ಸೇವೆಯನ್ನು ನೀವು ಮುಂದುವರಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com