ಶಿವಣ್ಣರ 'ರುಸ್ತುಂ' ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ವಿವೇಕ್ ಒಬೆರಾಯ್!

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ರುಸ್ತುಂ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಾಹಸ ನಿರ್ದೇಶಕ ರವಿವರ್ಮಾ ಇದೀ ತಮ್ಮ ಚಿತ್ರಕ್ಕಾಗಿ ಬಾಲಿವುಡ್...
ಶಿವರಾಜ್ ಕುಮಾರ್-ವಿವೇಕ್ ಒಬಿಯಾರ್
ಶಿವರಾಜ್ ಕುಮಾರ್-ವಿವೇಕ್ ಒಬಿಯಾರ್
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ರುಸ್ತುಂ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಾಹಸ ನಿರ್ದೇಶಕ ರವಿವರ್ಮಾ ಇದೀ ತಮ್ಮ ಚಿತ್ರಕ್ಕಾಗಿ ಬಾಲಿವುಡ್ ನಟನನ್ನು ಕರೆತರುತ್ತಿದ್ದಾರೆ. 
ರುಸ್ತುಂ ಚಿತ್ರದ ಮೂಲಕ ಬಾಲಿವುಡ್ ನಟ ವಿವೇಕ್ ಒಬಿರಾಯ್ ಸ್ಯಾಂಡಲ್‍ವುಡ್‍ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಚಿತ್ರದ ಪಾತ್ರದಾರಿಗಳ ಆಯ್ಕೆ ಕುರಿತಂತೆ ಅಭಿಮಾನಿಗಳಲ್ಲಿ ನಿರೀಕ್ಷೆಗಳು ಹೆಚ್ಚಿಸಿವೆ. 
ಈ ಹಿಂದೆ ರವಿವರ್ಮ ಕನ್ನಡಕ್ಕೆ ಬಾಲಿವುಡ್ ನಟರನ್ನು ಕರೆತರುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು. ಸ್ಯಾಂಡಲ್‍ವುಡ್‍ಗೆ ಪಾದಾರ್ಪಣೆ ಮಾಡುತ್ತಿರುವ ಬಾಲಿವುಡ್ ನಟ ಯಾರು ಎಂಬ ನಿರೀಕ್ಷೆಗಳು ಹೆಚ್ಚಾಗಿತ್ತು. ಇದೀಗ ರುಸ್ತುಂ ಚಿತ್ರದಲ್ಲಿ ನಟಿಸಲು ವಿವೇಕ್ ಒಬಿಯಾರ್ ಓಕೆ ಅಂದಿದ್ದಾರೆ. 
ಇನ್ನು ಚಿತ್ರದ ಕುರಿತಂತೆ ಮಾತನಾಡಿರುವ ವಿವೇಕ್ ಒಬಿರಾಯ್ ನಾನು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನನ್ನ ಪಾತ್ರದ ಬಗ್ಗೆ ನಿರ್ದೇಶಕರು ಕುತೂಹಲವನ್ನು ಹೆಚ್ಚಿಸಿದ್ದಾರೆ. ಸದ್ಯಕ್ಕೆ ನನ್ನ ಪಾತ್ರದ ಬಗ್ಗೆ ನಾನು ಹೆಚ್ಚಿಗೆ ಹೇಳುವುದಿಲ್ಲ ಎಂದು ಹೇಳಿದ್ದಾರೆ. 
ಚಿತ್ರ ಜಯಣ್ಣ ಕಂಬೈನ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು ಅನೂಪ್ ಸೀಳಿನ್ ಸಂಗೀತ ಸಂಯೋಜಿಸುತ್ತಿದ್ದು ನವೀನ್ ಕುಮಾರ್ ಅವರ ಛಾಯಾಗ್ರಹಣವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com