ಪುನೀತ್ ಅಭಿನಯದ ನಟಸಾರ್ವಭೌಮ ಚಿತ್ರಕ್ಕೆ ಸಂಕಷ್ಟ, ದಕ್ಷಿಣ ಕಾಶಿಯಲ್ಲಿ ಚಿತ್ರೀಕರಣಕ್ಕೆ ತಡೆ!

ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಚಿತ್ರೀಕರಣಕ್ಕೆ ಸಂಕಷ್ಟ ಎದುರಾಗಿದೆ...
ನಟಸಾರ್ವಭೌಮ
ನಟಸಾರ್ವಭೌಮ
Updated on
ಬಾದಾಮಿ: ಸ್ಯಾಂಡಲ್ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಚಿತ್ರೀಕರಣಕ್ಕೆ ಸಂಕಷ್ಟ ಎದುರಾಗಿದೆ. 
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಐತಿಹಾಸಿಕ ಕೇಂದ್ರ ಮಹಾಕೂಟದಲ್ಲಿ ಚಿತ್ರದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿತ್ತು. ಮಹಾಕೂಟೇಶ್ವರ ದೇವಾಲಯದ ಪಕ್ಕದಲ್ಲಿಯೇ ಇರುವ ಪುಷ್ಕರಣಿಯಲ್ಲಿ ಬೃಹತ್ ಸೆಟ್ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಪುಷ್ಕರಣಿಯಲ್ಲಿ ಸೆಟ್ ಆಗಿರುವುದರಿಂದ ನೀರಿನ ಸೆಲೆಗೆ ಕುತ್ತುಂಟಾಗುತ್ತದೆ ಎಂದು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. 
ಸ್ಥಳೀಯರ ತೀವ್ರ ವಿರೋಧದ ನಡುವೆ ಪುರಾತತ್ವ ಇಲಾಖೆ ಮಹಾಕೊಟೇಶ್ವರದಲ್ಲಿ ಚಿತ್ರದ ಚಿತ್ರೀಕರಣ ನಡೆಸದಂತೆ ಚಿತ್ರತಂಡಕ್ಕೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com