ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾರ್ತಿಕ್ ಚಂದ್ರ ಈ ಬಗ್ಗೆ ಮಾತನಾಡಿದ್ದು, ಕೆಎಫ್ ಸಿಸಿ ಅಧ್ಯಕ್ಷರಿಗೆ ನಮ್ಮ ಸಮಸ್ಯೆಗಳ ಕುರಿತಂತೆ ವಿವರಿಸಿ ಪತ್ರವನ್ನು ನೀಡಿದ್ದೇವೆ. ಸೆನ್ಸಾರ್ ಬೋರ್ಡ್ ನಲ್ಲಿ ನಿರ್ದಿಷ್ಟ ತುಣುಕುಗಳಿಗೆ ಕತ್ತರಿ ಹಾಕುವಂತೆ ಆದೇಶ ನೀಡಲಾಗುತ್ತದೆ. ನಿಯಮಗಳ ಪ್ರಕಾರ ಈ ಬಗ್ಗೆ ನಿರ್ದೇಶಕರು, ನಿರ್ಮಾಪಕರೊಂದಿಗೆ ಚರ್ಚೆ ನಡೆಸಬಹುದು ಆದರೆ ಅದು ಆಗುತ್ತಿಲ್ಲ, ಸೆನ್ಸಾರ್ ಬೋರ್ಡ್ ನ ತೀರ್ಮಾನದಂತೆಯೇ ನಡೆದುಕೊಳ್ಳಲು ಅಪೇಕ್ಷಿಸುತ್ತಾರೆ ಎಂದು ಆರೋಪಿಸಿದ್ದಾರೆ.