ಎ ಕ್ಲಾಸ್ ಟ್ರೀಟ್ಮೆಂಟ್ ವಿರೋಧಿಸಿ ನಿರ್ದೇಶಕ, ನಿರ್ಮಾಪಕರ ಪ್ರತಿಭಟನೆ!

ಚಿತ್ರಗಳಿಗೆ ಪ್ರಮಾಣೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ವಿರೋಧಿಸಿ 100 ಕ್ಕೂ ಹೆಚ್ಚು ನಿರ್ದೇಶಕರು, ನಿರ್ಮಾಪಕರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಎ ಕ್ಲಾಸ್ ಟ್ರೀಟ್ಮೆಂಟ್ ವಿರೋಧಿಸಿ ನಿರ್ದೇಶಕ, ನಿರ್ಮಾಪಕರ ಪ್ರತಿಭಟನೆ!
ಎ ಕ್ಲಾಸ್ ಟ್ರೀಟ್ಮೆಂಟ್ ವಿರೋಧಿಸಿ ನಿರ್ದೇಶಕ, ನಿರ್ಮಾಪಕರ ಪ್ರತಿಭಟನೆ!
Updated on
ಬೆಂಗಳೂರು: ಚಿತ್ರಗಳಿಗೆ ಪ್ರಮಾಣೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ವಿರೋಧಿಸಿ 100 ಕ್ಕೂ ಹೆಚ್ಚು ನಿರ್ದೇಶಕರು, ನಿರ್ಮಾಪಕರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ. 
ಸೆನ್ಸಾರ್ ಬೋರ್ಡ್ ನಿಂದ ಚಿತ್ರಗಳ ಪ್ರಮಾಣೀಕರ ಪ್ರಕ್ರಿಯೆ ವಿಳಂಬವಾಗುತ್ತಿದೆ, ಅಷ್ಟೇ ಅಲ್ಲದೇ ಚಿತ್ರಗಳಿಗೆ ಎ ಪ್ರಮಾಣಪತ್ರ ನೀಡುತ್ತಿರುವುದರಿಂದ ಸರ್ಕಾರದಿಂದ ಸಬ್ಸಿಡಿ ಸಿಗುತ್ತಿಲ್ಲ, ಸ್ಯಾಟಲೈಟ್ ಹಕ್ಕುಗಳನ್ನೂ ಪಡೆಯುವುದು ದುಸ್ತರವಾಗಿದೆ ಎಂದು ನಿರ್ದೇಶಕ, ನಿರ್ಮಾಪಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾರ್ತಿಕ್ ಚಂದ್ರ ಈ ಬಗ್ಗೆ ಮಾತನಾಡಿದ್ದು, ಕೆಎಫ್ ಸಿಸಿ ಅಧ್ಯಕ್ಷರಿಗೆ ನಮ್ಮ ಸಮಸ್ಯೆಗಳ ಕುರಿತಂತೆ ವಿವರಿಸಿ ಪತ್ರವನ್ನು ನೀಡಿದ್ದೇವೆ. ಸೆನ್ಸಾರ್ ಬೋರ್ಡ್ ನಲ್ಲಿ ನಿರ್ದಿಷ್ಟ ತುಣುಕುಗಳಿಗೆ ಕತ್ತರಿ ಹಾಕುವಂತೆ ಆದೇಶ ನೀಡಲಾಗುತ್ತದೆ. ನಿಯಮಗಳ ಪ್ರಕಾರ ಈ ಬಗ್ಗೆ ನಿರ್ದೇಶಕರು, ನಿರ್ಮಾಪಕರೊಂದಿಗೆ ಚರ್ಚೆ ನಡೆಸಬಹುದು ಆದರೆ ಅದು ಆಗುತ್ತಿಲ್ಲ, ಸೆನ್ಸಾರ್ ಬೋರ್ಡ್ ನ ತೀರ್ಮಾನದಂತೆಯೇ ನಡೆದುಕೊಳ್ಳಲು ಅಪೇಕ್ಷಿಸುತ್ತಾರೆ ಎಂದು ಆರೋಪಿಸಿದ್ದಾರೆ. 
ಚರ್ಚೆಗೆ ಕೂತೊಡನೆಯೇ ಎ ಸರ್ಟಿಫಿಕೇಟ್ ನೀಡುತ್ತೇವೆ ಎಂದು ಬೆದರಿಕೆ ಹಾಕುತ್ತಾರೆ, ಇನ್ನೂ ಹೆಚ್ಚು ಮಾತನಾಡಿದರೆ ಉನ್ನತ ಮಟ್ಟದ ಅಧಿಕಾರಿಗಳಿಗೆ ದೂರು ನೀಡುವುದಾಗಿ ಎಚ್ಚರಿಸುತ್ತಾರೆ. ನಮಗೆ ಬೇರೆ ಆಯ್ಕೆಗಳಿಲ್ಲದೇ ಪ್ರತಿಭಟನೆ ನಡೆಸುತ್ತಿದ್ದೇವೆ. ಹೇಳಿದ್ದಾರೆ. ಪ್ರಾರಂಭದಲ್ಲಿ ನನಗೆ ಮಾತ್ರ ಈ ಸಮಸ್ಯೆ ಕಾಡುತ್ತಿದೆ ಎಂದುಕೊಂಡಿದ್ದೆ, ಆದರೆ ನನ್ನಂತೆಯೇ ಹಲವು ನಿರ್ಮಾಪಕರೂ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನುತ್ತಾರೆ ಕಾರ್ತಿಕ್ ಚಂದ್ರ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com