ಈ ಹಿನ್ನಲೆಯಲ್ಲಿ ವಾರಂಟ್ ಸಮೇತ ಚನ್ನಮ್ಮನ ಕೆರೆ ಅಚ್ಚುಕಟ್ಟುವಿನಲ್ಲಿರುವ ಪಿ.ಸುಂದರ್ಗೌಡ ಮನೆಗೆ ಪೊಲೀಸರು ಬುಧವಾರ ರಾತ್ರಿ 10.30 ಗಂಟೆ ಸುಮಾರಿಗೆ ಹೋಗಿದ್ದರು. ಆದರೆ ಅದೇ ವೇಳೆ ಸುಂದರ್ ಗೌಡ, ದುನಿಯಾ ವಿಜಯ್ ಹಾಗೂ ತನ್ನ ಸ್ನೇಹಿತರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಬಂದ ವಿಜಯ್, ಪೊಲೀಸರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ವಿಜಯ್, 'ಸುಂದರ್ ಗೌಡ ತಾಯಿಗೆ ಹುಷಾರಿಲ್ಲ. ರಾತ್ರಿಯೇ ಆತನನ್ನು ಬಂಧಿಸಿ ಕರೆದೊಯ್ದರೆ, ಆಕೆಗೆ ತೊಂದರೆ ಆಗುತ್ತದೆ. ನಾಳೆ ನಾನೇ ಆತನನ್ನು ಠಾಣೆಗೆ ಕರೆದುಕೊಂಡು ಬರುತ್ತೇನೆ. ಈಗ ವಾಪಸ್ ಹೋಗಿ' ಎಂದು ವಿಜಯ್ ಹೇಳಿದ್ದರು. ಅದಕ್ಕೆ ಪೊಲೀಸರು ಒಪ್ಪದಿದ್ದಾಗ, ಮನವೊಲಿಸಲು ಯತ್ನಿಸಿದ್ದರು.