ಈ ಹಿಂದೆ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಳಾ ಚಿತ್ರದ ಬಿಡುಗಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ್ದ ನಟ ಸ್ಟೈಲ್ ರಾಜಾ ಚಿತ್ರದ ನಾಯಕ ನಟ ಗಿರೀಶ್ ಇದೀಗ ತಮ್ಮ ಕೃತ್ಯಕ್ಕೆ ಕ್ಷಮೆ ಯಾಚಿಸಿದ್ದಾರೆ. ಇನ್ನು ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನಟ ಗಿರೀಶ್ ಮಾತನಾಡಿ, ರಜನಿಕಾಂತ್ ಅಭಿನಯದ ಕಾಳಾ ಚಿತ್ರದ ಬಿಡುಗಡೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ತಾಕಿತ್ತಿದ್ದರೆ ಈ ಚಿತ್ರ ಬಿಡುಗಡೆ ತಡೆಯಿರಿ. ಕರ್ನಾಟಕದಲ್ಲಿರುವ ರಜನಿಕಾಂತ್ ಅಭಿಮಾನಿಗಳು ಈ ಚಿತ್ರವನ್ನು ನೋಡುತ್ತಾರೆ ಎಂದು ಹೇಳಿ ವಿಡಿಯೋ ಅಪ್ಲೋಡ್ ಮಾಡಿದ್ದರು.