ತಲ್ವಾರ್ ಹಿಡಿದು ಬಿಜೆಪಿ ಕಾರ್ಯಕರ್ತನನ್ನು ಅಟ್ಟಾಡಿಸಿದ ತುಳು ನಟ!

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಸ್ಪರ ವಾಗ್ವಾದ ಹಿನ್ನೆಲೆಯಲ್ಲಿ ತುಳು ನಟ ಸುರೇಂದ್ರ ಶೆಟ್ಟಿ ಬಂಟ್ಲಾಳ್ ಅವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ.
ಸುರೇಂದ್ರ ಬಂಟ್ವಾಳ್
ಸುರೇಂದ್ರ ಬಂಟ್ವಾಳ್
ಬಿಸಿ ರೋಡ್(ಮಂಗಳೂರು): ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಸ್ಪರ ವಾಗ್ವಾದ ಹಿನ್ನೆಲೆಯಲ್ಲಿ ತುಳು ನಟ ಸುರೇಂದ್ರ ಶೆಟ್ಟಿ ಬಂಟ್ಲಾಳ್ ಅವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. 
ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ನಲ್ಲಿ ಸುರೇಂದ್ರ ಶೆಟ್ಟಿ ತಲ್ವಾರ್ ಹಿಡಿದು ಬಿಜೆಪಿ ಕಾರ್ಯಕರ್ತರನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಗಣೇಶ್ ರೈ ಮಾಣಿ ಮತ್ತು ಪುಷ್ಪರಾಜ್ ಎಂಬು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಬಿಸಿ ರೋಡ್ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 
ಸುರೇಂದ್ರ ಬಂಟ್ವಾಳ್ ಅವರು ತುಳುವಿನ ಚಾಲಿ ಪೋಲಿಲು ಚಿತ್ರದಲ್ಲಿ ನಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com