'ಕುರುಕ್ಷೇತ್ರ' ಆಡಿಯೊ ಜುಲೈ 29ಕ್ಕೆ ಬಿಡುಗಡೆ

ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರ ಈ ವರ್ಷದ ಬಹುನಿರೀಕ್ಷಿತ ಚಿತ್ರವಾಗಿದೆ. ಪುರಾಣ ...
ಕುರುಕ್ಷೇತ್ರದಲ್ಲಿ ನಟ ದರ್ಶನ್
ಕುರುಕ್ಷೇತ್ರದಲ್ಲಿ ನಟ ದರ್ಶನ್
Updated on

ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರ ಈ ವರ್ಷದ ಬಹುನಿರೀಕ್ಷಿತ ಚಿತ್ರವಾಗಿದೆ. ಪುರಾಣ ಕಥೆಯನ್ನಾಧರಿಸಿದ ಈ ಚಿತ್ರದ ಆಡಿಯೊ ಬಿಡುಗಡೆ ಬಗ್ಗೆ ಸಾಕಷ್ಟು ಮಾತುಗಳು, ಸುದ್ದಿಗಳು ಹರಿದಾಡುತ್ತಿವೆ.

ಇತ್ತೀಚೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಜುಲೈ 29ರಂದು ಕುರುಕ್ಷೇತ್ರ ಆಡಿಯೊ ಬಿಡುಗಡೆಯಾಗಲಿದೆ. ಇದರಲ್ಲಿ ನಾಲ್ಕು ಪ್ರಮುಖ ಹಾಡುಗಳಿದ್ದು ಶ್ಲೋಕ ಮತ್ತು ಸ್ಕಂದ ಪದ್ಯ ಕೂಡ ಇದೆ. ವಿ. ಹರಿಕೃಷ್ಣ ಅವರ ಸಂಗೀತ ಮತ್ತು ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯವಿದೆ. ಚಿತ್ರದ ಡಬ್ಬಿಂಗ್ ಕಾರ್ಯ ಮುಗಿದಿದ್ದು ಗ್ರಾಫಿಕ್ಸ್ ಕೆಲಸದಿಂದಾಗಿ ಹೆಚ್ಚು ಸಮಯ ಹಿಡಿಯುತ್ತಿದೆ.

ನಾಗಣ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮುನಿರತ್ನ ಕುರುಕ್ಷೇತ್ರ ಚಿತ್ರಕ್ಕೆ ನಾಗೇಂದ್ರ ಪ್ರಸಾದ್ ಮತ್ತು ಮತ್ತಿಬ್ಬರು ನಿರ್ದೇಶಕರು ಕೂಡ ಜೊತೆಯಾಗಿದ್ದಾರೆ. ದರ್ಶನ್ ಅವರ 50ನೇ ಚಿತ್ರ ಇದಾಗಿದ್ದು ದುರ್ಯೋಧನ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಅಂಬರೀಷ್, ವಿ.ರವಿಚಂದ್ರನ್, ಅರ್ಜುನ್ ಜನ್ಯ, ರವಿ ಶಂಕರ್, ನಿಖಿಲ್ ಕುಮಾರ್, ಸ್ನೇಹ, ಮೇಘನಾ ರಾಜ್, ಹರಿಪ್ರಿಯಾ, ಸೋನು ಸೂದ್, ದನೀಶ್ ಅಖ್ತರ್ ಸೈಫಿ ಪಾತ್ರ ನಿರ್ವಹಿಸಿದ್ದಾರೆ. ಜಯಣ್ಣ ವಿನ್ಸೆಂಟ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com