ಈ ಸಂಬಂಧ ಇಂದು ಕಾರ್ಯಾಚರಣೆ ನಡೆಸಿದ ಜ್ಞಾನಭಾರತಿ ಪೊಲೀಸರು ಸುನಾಮಿ ಕಿಟ್ಟಿ. ಅರ್ಜುನ್ ಮತ್ತು ಯೋಗೇಂದ್ರ ಎಂಬುವವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ಗಿರೀಶ್ ನಾಪತ್ತೆಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಇನ್ನು ಅಪಹರಣ ಹಾಗೂ ಹಲ್ಲೆಗೊಳಗಾದ ಕುಟೀರ ಪಾರ್ಕ್ ಲ್ಯಾಂಡ್ ಬಾರ್ನ ಸಪ್ಲೈಯರ್ ಗಿರೀಶ್, ಜ್ಞಾನಭಾರತಿ ಠಾಣೆಯಲ್ಲಿ ಸುನಾಮಿ ಕಿಟ್ಟಿ ಹಾಗೂ ತಂಡದ ವಿರುದ್ಧ ಐಪಿಸಿ ಸೆಕ್ಷನ್ 363,307, 397 506, 149ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.