ಇನ್ನು ನಿನ್ನೆ ಇದೇ ವಿಚಾರವಾಗಿ ನಡೆದ ಸಂಧಾನಸಭೆ ವಿಫಲವಾಗಿದೆ ಎಂದು ತಿಳಿದುಬಂದಿದ್ದು, ಸಭೆಯ ಬಳಿಕ ಯುಎಫ್ಒ ಜತೆಗಿನ ಮಾತುಕತೆ ಮುರಿದು ಬಿದ್ದಿದೆ ಎಂದು ಫಿಲಂ ಚೇಂಬರ್ ಅಧ್ಯಕ್ಷ ಸಾ.ರಾ.ಗೋವಿಂದು ಹೇಳಿದ್ದಾರೆ. ಬೆಂಗಳೂರಿನ ಫಿಲಂ ಚೇಂಬರ್ನಲ್ಲಿ ಯುಎಫ್ಒ , ಕ್ಯೂಬ್ ಜತೆ ನಡೆದ ಮಹತ್ವದ ಸಭೆಯಲ್ಲಿ ಸಾ.ರಾ.ಗೋವಿಂದು, ಮುನಿರತ್ನ, ನಟ ಪ್ರಕಾಶ್ ರೈ, ರಾಕ್ಲೈನ್ ವೆಂಕಟೇಶ್, ತಮಿಳು ನಟ ವಿಶಾಲ್ ಭಾಗಿಯಾಗಿದ್ದರು.