ಆಂತಕಪಡಬೇಕಾದ ಅಗತ್ಯವಿಲ್ಲ. ಆರೋಗ್ಯದಲ್ಲಿ ಚೇತರಿಕೆ ಉಂಟಾಗಿದ್ದು, 2-3 ದಿನಗಳಲ್ಲಿ ಆಸ್ಪತ್ರೆಯಿಂದ ಬಿಡಿಗಡೆ ಮಾಡುವುದಾಗಿ ವೈದ್ಯರು ಭರವಸೆ ನೀಡಿದ್ದಾರೆ. ಆದರೆ, ಮಂಗಳವಾರ ಸಂಜೆ ವೇಳೆಗೆ ಜಯಂತಿ ಅವರು ಮೃತಪಟ್ಟಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ. ಅನಗತ್ಯವಾಗಿ ವದಂತಿಗಳನ್ನು ಹಬ್ಬಿಸಬೇಡಿ, ಸೋಮವಾಗ ಅಮ್ಮನಿಗೆ ಪ್ರಜ್ಞೆ ಇರಲಿಲ್ಲ. ಮಂಗಳವಾರ ಆರೋಗ್ಯ ವಿಚಾರಿಸಲು ಬಂದವರಿಗೆ ಸ್ಪಂದಿಸುತ್ತಿದ್ದಾರೆ. ಬುಧವಾರ ತೀವ್ರ ನಿಗಾ ಘಟಕದಿಂದ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸುವ ಭರವಸೆ ನೀಡಿದ್ದಾರೆಂದು ಜಯಂತಿಯವರ ಪುತ್ರ ಕೃಷ್ಣ ಕುಮಾರ್ ಅವರು ಹೇಳಿದ್ದಾರೆ.