ಗುರುಪ್ರಸಾದ್ ಅವರಿಗೆ ನೈತಿಕತೆ ಇದ್ದಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ಮನುಷ್ಯನಿಗೆ ಅಷ್ಟು ಸೇಡು ಇರಬಾರದು. ನೀವು ನಿಮ್ಮ ಸುತ್ತಮುತ್ತಲಿನ ನಾಲ್ಕು ಜನರನ್ನು ತುಳಿಯಲು ಯತ್ನಿಸುತ್ತಿದ್ದೀರಿ. ಆದರೆ ನಿಮ್ಮನ್ನು ಸಹ ತುಳಿಯುವವರೂ ಇರುತ್ತಾರೆ. ಇವಾಗಲಾದರೂ ನಾಲ್ಕು ಜನ ನಿಮ್ಮ ಪರವಾಗಿ ಮಾತನಾಡುವವರನ್ನು ಉಳಿಸಿಕೊಳ್ಳಿ. ಈ ರೀತಿಯ ವರ್ತನೆಯನ್ನು ಬಿಟ್ಟು ನೆಮ್ಮದಿಯಾಗಿ ಉಸಿರಾಡುವುದನ್ನು ಕಲಿತುಕೊಳ್ಳಲಿ ಎಂದು ಧನಂಜಯ್ ಕಿಡಿಕಾರಿದ್ದಾರೆ.