ರಾಜಕುಮಾರ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ರಾಮ್ ಮುಂದಿನ ಚಿತ್ರಕ್ಕೆ ಯುವರತ್ನ ಎಂದು ಶೀರ್ಷಿಕೆ ಫಿಕ್ಸ್ ಆಗಿದೆ.
ಕನ್ನಡ ರಾಜ್ಯೋತ್ಸವದಂದೇ ಚಿತ್ರತಂಡ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮದಲ್ಲಿ ಹೊಸ ಸಿನಿಮಾದ ಶೀರ್ಷಿಕೆಯನ್ನು ಅಭಿಮಾನಿಗಳ ಕೈಯಿಂದ ಬಿಡುಗಡೆ ಮಾಡಿಸಿದೆ.
ಕಾವೇರಿ ಚಿತ್ರಮಂದಿರದಲ್ಲಿ ಆಯೋಜಿಸಲಾಗಿದ್ದ ಟೈಟಲ್ ಲಾಂಚ್ ಕಾರ್ಯಕ್ರಮದಲ್ಲಿ ಮುದ್ದಾದ ಇಬ್ಬರು ಪುಟ್ಟ ಅಭಿಮಾನಿಗಳಿಂದ ಸಿನಿಮಾ ಟೈಟಲ್ ಬಿಡುಗಡೆ ಮಾಡಿಸಲಾಗಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.
ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದು ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿರ್ಮಾಪಕ ವಿಜಯ್ ಕಿರಂಗದೂರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.