ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನದ 2.0 ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚೆನ್ನೈನಲ್ಲಿ ಭರ್ಜರಿಯಾಗಿ ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶುಭಕೋರಿ ಶಿವರಾಜಕುಮಾರ್ ಹಾಗೂ ಉಪ್ಪಿ ವಿಡಿಯೋ ಸಂದೇಶವನ್ನು ಕಳುಹಿಸಿದ್ದರು. ಈ ಇಬ್ಬರೂ ನಟರು ಇಡೀ ಸಂದೇಶವನ್ನು ಸಂಪೂರ್ಣವಾಗಿ ತಮಿಳಿನಲ್ಲೇ ಮಾತನಾಡುತ್ತಾ ಕಳುಹಿಸಿದ್ದಾರೆ.