ದೇವರಾಜ್, ಚಿಕ್ಕಣ್ಣ, ಸಾಧು ಕೋಕಿಲಾ ಸೇರಿದಂತೆ ಬಹುದೊಡ್ಡ ತಾರಾಬಳಗವಿರುವ ನಾಗಶೇಖರ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಆಲ್ಫ್ ಪರ್ವತ ಶ್ರೇಣಿಗಳಲ್ಲಿ ನವೆಂಬರ್ 18ರವರೆಗೆ ನಡೆಯಲಿದೆ. ಇದಾದ ಬಳಿಕ ಬೆಂಗಳೂರಿಗೆ ಹಿಂತಿರುಗಲಿರುವ ಚಿತ್ರತಂಡ ಡಿಸೆಂಬರ್ 15ಕ್ಕೆ ಚಿತ್ರೀಕರಣ ಪೂರ್ಣಗೊಳಿಸುವ ಯೋಜನೆ ಹಾಕಿಕೊಂಡಿದೆ.